ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸೀಬರ್ಡ್ ನೌಕಾನೆಲೆ ಮಾಹಿತಿ ನೀಡಿದ ಆರೋಪದಲ್ಲಿ ಮೂವರು ವಶಕ್ಕೆ

ಕಾರವಾರ: ಸೀಬರ್ಡ್ ನೌಕಾನೆಲೆ ಮಾಹಿತಿ ನೀಡಿದ ಆರೋಪದಲ್ಲಿ ಮೂವರು ವಶಕ್ಕೆ

Thu, 29 Aug 2024 01:32:52  Office Staff   SOnews

 

ಕಾರವಾರ: ಹಣದ ಲಾಭಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋಗಳು ಮತ್ತು ಇತರ ಮಾಹಿತಿಯನ್ನು ನೀಡಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಎನ್‌ಐಎ (NIA) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್, ಮತ್ತು ಹಳವಳ್ಳಿಯ ಅಕ್ಷಯ್ ರವಿ ನಾಯ್ಕ್ ಅವರನ್ನು ಎನ್‌ಐಎ ಡಿವೈಎಸ್‌ಪಿ ಮತ್ತು ಮೂರು ಇನ್ಸ್‌ಪೆಕ್ಟರ್‌ಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ದೀಪಕ್ ಮತ್ತು ಇತರರ ಬಂಧನದ ಬೆನ್ನಿಗೇ ಈ ಆರೋಪಿಗಳೂ ಎನ್‌ಐಎ ಕಣ್ಣಿಗೆ ಬಿದ್ದಿದ್ದಾರೆ. ದೀಪಕ್‌ನನ್ನು ಗೋವಾದಿಂದ ವಶಕ್ಕೆ ಪಡೆದಿದ್ದು, ಉಳಿದ ಇಬ್ಬರನ್ನು ಸೀಬರ್ಡ್ ನೌಕಾನಿಲೆಯಿಂದ ವಶಕ್ಕೆ ಪಡೆಯಲಾಗಿದೆ. ಈ ಆರೋಪಿಗಳು ಸೀಬರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. 2023ರಲ್ಲಿ ಹೈದ್ರಾಬಾದ್‌ನಲ್ಲಿ ನಡೆದ ಎನ್‌ಐಎ ಕಾರ್ಯಾಚರಣೆಯಲ್ಲಿ ದೀಪಕ್ ಮತ್ತು ಇತರರನ್ನು ಬಂಧಿಸಲಾಗಿತ್ತು. ವಿದೇಶಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದು, ದೀಪಕ್ ಮತ್ತು ಇತರರನ್ನು ವಿಚಾರಣೆಗೆ ಒಳಪಡಿಸಿದಾಗ, ಸುನೀಲ್ ನಾಯ್ಕ್, ವೇತನ್ ತಾಂಡೇಲ್, ಮತ್ತು ಅಕ್ಷಯ್ ರವಿ ನಾಯ್ಕ್ ಹೆಸರುಗಳು ಬಹಿರಂಗವಾದವು.

ಸೀಬರ್ಡ್ ನೌಕಾನೆಲೆ ಫೋಟೋ ಮತ್ತು ಇತರ ಮಾಹಿತಿಯನ್ನು ದೀಪಕ್ ಮತ್ತು ಇತರರಿಗೆ ರವಾನಿಸಿರುವ ಆರೋಪದ ಮೇಲೆ ಈ ಮೂವರ ಖಾತೆಗಳಿಗೆ ಹಣ ಜಮಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಕ್ಷಯ್ ನಾಯ್ಕ್ ಹಿಂದಿನಲ್ಲಿ ಸೀಬರ್ಡ್ ನೌಕಾನೆಲೆ ಒಳಗೆ ಕೆಲಸ ಮಾಡುತ್ತಿದ್ದ, ಆದರೆ ಬಳಿಕ ಗೋವಾದಲ್ಲಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಎನ್‌ಐಎ ಅಧಿಕಾರಿಗಳು ಅಕ್ಷಯ್ ರವಿ ನಾಯ್ಕ್‌ನ ಮೊಬೈಲ್ ಮತ್ತು ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿ, ವಿಚಾರಣೆಗಾಗಿ ನೋಟಿಸ್ ನೀಡಿದ ನಂತರ ಅವರನ್ನು ಬಿಟ್ಟಿದ್ದಾರೆ. ಆದರೆ, ವೇತನ್ ತಾಂಡೇಲ್ ಮತ್ತು ಅಕ್ಷಯ್ ನಾಯ್ಕ್ ಅವರನ್ನು ಗುಪ್ತ ಸ್ಥಳದಲ್ಲಿ ಇನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ.

 


Share: