ದುಬೈ, ನವೆಂಬರ್ 10: ನಗರದಲ್ಲಿ ಕನ್ನಡಪರ ಚಟುವಟಿಕೆಗಳಿಂದ ಕಾರ್ಯನಿರತವಾಗಿರುವ ಕನ್ನಡ ಕೂಟ ಯು.ಎ.ಇ. ಸಂಘಟನೆ ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ನಗರದ ಅಲ್ ಬರ್ಶಾ ದಲ್ಲಿರುವ ಜೆ.ಎಸ್.ಎಸ್. ಶಾಲಾ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಿದೆ.
ಕರ್ನಾಟಕದ ಖ್ಯಾತ ವಿದ್-ಯೂಥ್ ತಂಡದ ಸುಮಾರು ಒಂದು ಡಜನ್ ಕಲಾವಿದರು ಆಗಮಿಸಲಿದ್ದು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಈ ಕೆಳಗೆ ನೀಡಲಾಗಿದೆ.

ಎಲ್ಲಾ ಕನ್ನಡಿಗರು ಈ ಕಾರ್ಯಕ್ರಮಕ್ಕೆ ಹಾಜರಾಗಿ ರಾಜ್ಯೋತ್ಸವವನ್ನು ವಿಜೃಂಬಣೆಯಿಂದ ಆಚರಿಸಲು ವಿನಂತಿಸಿಕೊಳ್ಳಲಾಗಿದೆ.