Sun, 16 Jun 2024 05:40:48Office Staff
ಹಿರಿಯ ನಾಗರಿಕರ ರಿಯಾಯಿತಿ ನೀಡದೇ ನಿರ್ವಾಹಕರು ಸೇವಾ ನ್ಯೂನತೆ ಎಸಗಿರುವ ಪ್ರಕರಣದಲ್ಲಿ ನಿರ್ವಾಹಕರಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿ, ಕಿರಿಯ ನೌಕರರ ಬಗ್ಗೆ ನಿರ್ಲಕ್ಷ್ಯ ತೋರಿದ ಎನ್ಡಬ್ಲೂಕೆಆರ್ಟಿಸಿ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಕುಮಟಾ ಹಾಗೂ ದಾಂಡೇಲಿ ಡಿಪೋ ಮ್ಯಾನೇಜರ್ಗಳಿಗೆ 3ಸಾವಿರ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
View more
Sun, 16 Jun 2024 05:37:00Office Staff
ಪ್ರಸಕ್ತ ಶೈಕ್ಷಣಿಕ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್, ಸಾಲಗಾಂವ, ಮುಂಡಗೋಡ ಸಂಸ್ಥೆಯಲ್ಲಿ ಸಿವಿಲ್, ಮೆಕ್ಯಾನಿಕಲ್, ಇ&ಸಿ ಹಾಗೂ ಕಂಪ್ಯೂಟರ್ ಸೈನ್ಸ್. ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪ್ರಾಂಶುಪಾಲರ ಹಂತದಲ್ಲಿ “ಆಫ್-ಲೈನ್” ಮೂಲಕ ಮೆರಿಟ್ ಹಾಗೂ ರೋಷ್ಠರ್ ಆಧಾರದ ಮೇರೆಗೆ ಎಸ್. ಎಸ್. ಎಲ್.ಸಿ. ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಇನ್ನೂ ಉಳಿದಿರುವ ಕೆಲವೇ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
View more
Sat, 15 Jun 2024 02:12:09Office Staff
೨೧ನೇ ಶತಮಾನದಲ್ಲಿ ಕಂಪ್ಯೂಟರ್ ಸಾಪ್ಟವೇರ್ ಕ್ಷೇತ್ರದಲ್ಲಿ ಸರ್ವರಂತೆ ದಿವ್ಯಾಂಗ (ಅಂಧ) ವಿದ್ಯಾರ್ಥಿಗಳೂ ಸಹ ಕಂಪ್ಯೂಟರ್ ಪ್ರೋಗ್ರಾಮಿಂಗ್ ಲಾಜಿಕ್ ಅನ್ನು ಸುಲಭವಾಗಿ ಕಲಿತು ಸಾಪ್ಟವೇರ್ ಕ್ಷೇತ್ರದಲ್ಲಿ ಉದ್ಯೋಗ ಪಡೆದು ಸಾಧನೆಗೈದು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ "ಟ್ಯಾಕ್ಟೈಲ್ ಬೆಸ್ಡ ಕೋಡಿಂಗ್ ಅಸ್ಸಿಸ್ಟಿವ್ ಟೂಲ್ ಫಾರ್ ಬ್ಲೈಂಡ್ ಪ್ರೋಗ್ರಾಮರ್ಸ್" ಎಂಬ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ.
View more
Sat, 15 Jun 2024 00:36:10Office Staff
ಭಟ್ಕಳ: ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಮತ್ತು ಅಂದಾಜು ಪತ್ರಿಕೆ ಸಿದ್ದಪಡಿಸುವ ಕುರಿತು ಭಟ್ಕಳ ತಾಲ್ಲೂಕಾ ಮಟ್ಟದ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್ ಹಾಗೂ ವಾಟರಮನ್ ಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ತಾಲ್ಲೂಕಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಜರುಗಿತು.
View more
Fri, 14 Jun 2024 20:00:59Office Staff
ಜೋಯಿಡಾ : ತಾಲೂಕಿನ ರಾಮನಗರ ಪೊಲೀಸ್ ಠಾಣೆಯ ಎದುರು ಯುವಕನ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಭಾಸ್ಕರ್ ಬೋಂಡೆಲ್ಕರ್ ಎಂಬಾತನೆ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ.
View more
Fri, 14 Jun 2024 19:49:43Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಆಲೋಚನೆಯಲ್ಲಿ ಮೂಡಿಬಂದ, ಅತ್ಯಂತ ಅಪರೂಪದ ಹಾಗೂ ವಿನೂತನ ಯೋಜನೆಯಾದ, ಗರ್ಭಿಣಿ ಮಹಿಳೆಯರ ಆರೋಗ್ಯದ ಕಾಳಜಿಯನ್ನು ದತ್ತು ನೀಡುವ ಯೋಜನೆಗೆ ಅಭೂತಪೂರ್ವ ಯಶಸ್ಸು ದೊರೆತಿದ್ದು, ಈ ಯೋಜನೆಯಡಿ ಗುರುತಿಸಲಾಗಿದ್ದ ಎಲ್ಲಾ ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಆಗಿದ್ದು, ಈ ಸಂದರ್ಭದಲ್ಲಿ ಯಾವುದೇ ತಾಯಿ ಮಗುವಿನ ಮರಣ ಸಂಭವಿಸಿಲ್ಲ..
ಸೆಪ್ಟಂಬರ್
View more
Fri, 14 Jun 2024 01:59:58Office Staff
ಒಂದು ವೇಳೆ ಪ್ರಕಟವಾದಲ್ಲಿ, ಪ್ರಕಟಿ ಪಡಿಸಿದವರ ವಿರುದ್ಧ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021, ಹಾಗೂ ಮಾದರಿ ನಿಯಮ 2016. ತಿದ್ದುಪಡಿ ನಿಯಮಗಳು 2022, ಸೆಕ್ಷನ್ 74(3) ಉಪಪ್ರಕರಣ (1) ನ್ನು ಉಲ್ಲಂಘಿಸುವAತಹ ಯಾರೇ ವ್ಯಕ್ತಿಯು ಆರು ತಿಂಗಳವರೆಗೆ ವಿಸ್ತರಿಸಲ್ಪಡಬಹುದಾದ ಕಾರಾಗೃಹ ದಂಡನೆ ಅಥವಾ 2 ಲಕ್ಷ ರೂ ವಿಸ್ತರಿಸಲ್ಪಡಬಹುದಾದ ಜುಲ್ತಾನೆ ಅಥವಾ ಉಭಯ ಶಿಕ್ಷೆಗಳಿಗೂ ಸಹ ದಂಡನೀಯವಾಗಿದೆ.
View more
Fri, 14 Jun 2024 01:55:03Office Staff
ಭಟ್ಕಳದ ಸುಲ್ತಾನ್ ವಿರುದ್ಧ ಭಯೋತ್ಪಾದನ ನಿಗ್ರಹ ದಳದಲ್ಲಿ ಪ್ರಕರಣ ದಾಖಲು; ಪುಣೆಯ ವಿಶೇಷ ನ್ಯಾಯಾಲಯದ ಮುಂದೆ ಜೂನ್ 21 ರೊಳಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
View more
Fri, 14 Jun 2024 01:45:03Office Staff
ಕಾರವಾರ: ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಗದAತೆ ಪ್ರತಿಯೊಂದು ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಸೂಚನೆ ನೀಡಿದರು.
View more