ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ

Tue, 16 Apr 2024 04:17:36  Office Staff   SO News

ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ,  ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.


Share: