ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಜೇನು ಸಾಕಾಣಿಕೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನ

ಕಾರವಾರ: ಜೇನು ಸಾಕಾಣಿಕೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನ

Sat, 19 Oct 2024 07:04:53  Office Staff   S O News

ಕಾರವಾರ: ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನ.5 ರಿಂದ 4 ಫೆಬ್ರವರಿ 2025 ರವರೆಗೆ ರೈತ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  

ಆಸಕ್ತರು ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ), ಶಿರಸಿ ಅಥವಾ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ), ಕಾರವಾರ ರವರ ಕಛೇರಿಯಲ್ಲಿ ಅಥವಾ https://horticulturedir.karnataka.gov.in  ಮೂಲಕ ಅ.21 ರಿಂದ ಅ.25 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿರಸಿಯ ತೋಟಗಾರಿಕೆ ಉಪನಿರ್ದೇಶಕರ ಕಛೇರಿಗೆ ಅ.28 ರೊಳಗಾಗಿ ಸಲ್ಲಿಸಬೇಕು.  

ಉತ್ತರ ಕನ್ನಡ ಜಿಲ್ಲೆಯ ಪ.ಜಾತಿಯ 1 ಅಭ್ಯರ್ಥಿ ಹಾಗೂ ಇತರೆ ವರ್ಗದ 2 ಅಭ್ಯರ್ಥಿಗಳನ್ನು ನಿಯಮಾನುಸಾರ ತರಬೇತಿಗೆ ಆಯ್ಕೆ ಮಾಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವತೆ ಶಿರಸಿಯ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share: