ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪ್ರಶಾಂತ ಆರ್ ನಾಯ್ಕ ಪ್ರಥಮ

ಕಾರವಾರ: ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪ್ರಶಾಂತ ಆರ್ ನಾಯ್ಕ ಪ್ರಥಮ

Wed, 08 Nov 2023 08:13:31  Office Staff   Press Release

ಕಾರವಾರ:  ಧಾರವಾಡದಲ್ಲಿ ನಡೆದ ಪ್ಯಾನ್ ಇಂಡಿಯಾ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ಆರ್. ನಾಯ್ಕ ಇವರು 5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ರಾಜ್ಯಕ್ಕೆ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ಅಂಜಲಿ ಎಸ್. ಮಾನೆ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ಹಿರಿಯ ತರಬೇತುದಾರರಾದ ಶ್ರೀ ಪ್ರಕಾಶ ರೇವಣಕರ ರವರು ತರಬೇತಿ ನೀಡಿರುತ್ತಾರೆ.


Share: